ಇಂದೇ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಿ: ಸ್ಪೀಕರ್ ಗೆ ರಾಜ್ಯಪಾಲರಿಂದ ಸಂದೇಶ
Update: 2019-07-18 11:49 GMT
ಬೆಂಗಳೂರು, ಜು.18: ‘ದಿನದ ಅಂತ್ಯದೊಳಗೆ ವಿಶ್ವಾಸಮತ ಸಾಬೀತುಪಡಿಸಿ’ ಎಂದು ಸ್ಪೀಕರ್ ರಮೇಶ್ ಕುಮಾರ್ ಗೆ ರಾಜ್ಯಪಾಲರು ಸಂದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲರ ಸಂದೇಶ ಪತ್ರವನ್ನು ಸದನದಲ್ಲಿ ಓದಿ ತಿಳಿಸಿದ ಸ್ಪೀಕರ್ ರಮೇಶ್ ಕುಮಾರ್ 'ಇಂದೇ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯಪಾಲರು ಸಂದೇಶ ನೀಡಿದ್ದಾರೆ. ಆದರೆ ನನಗೆ ನಿರ್ದೇಶನ ನೀಡಿಲ್ಲ ಎಂದು ತಿಳಿಸಿದರು.
ರಾಜ್ಯಪಾಲರ ಸಂದೇಶಕ್ಕೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.