ಕೇಂದ್ರ ಸರಕಾರದ ನಿಲುವು ಸ್ವಾಗತಾರ್ಹ: ಪ್ರದೀಪ ಕುಮಾರ ಕಲ್ಕೂರ

Update: 2019-07-18 12:39 GMT

ಮಂಗಳೂರು, ಜು.18: ಆಯಾಯ ರಾಜ್ಯಗಳ ಪ್ರಾದೇಶಿಕ ಭಾಷೆಗಳಿಗೆ ಸರಕಾರಿ ವಲಯದಲ್ಲಿ ಅಧಿಕೃತ ಮಾನ್ಯತೆ ನೀಡಿರುವ ಕೇಂದ್ರ ಸರಕಾರದ ನಿಲುವು ಸ್ವಾಗತಾರ್ಹವಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್‌ಮ್ಯಾನ್ ಹುದ್ದೆಯ ಆಕಾಂಕ್ಷಿಗಳಾಗಿದ್ದ ಕನ್ನಡಿಗರಿಗೆ ತಮ್ಮದೇ ಮಾತೃ ಭಾಷೆಯಾದ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಿ ಆದೇಶ ಹೊರಡಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಈಗಾಗಲೇ ನಡೆದಿದ್ದ ಪರೀಕ್ಷೆಯನ್ನು ರದ್ದುಪಡಿಸಿ ರಾಜ್ಯ ಭಾಷೆಯಲ್ಲೇ ಮರು ಪರೀಕ್ಷೆ ನಡೆಸುವುದಕ್ಕೆ ಅನುವು ಮಾಡಿಕೊಡುವಲ್ಲಿ ಹೋರಾಟ ಮಾಡಿದವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News