ಜು. 21ರಂದು ಬಂಟರ ಸಂಘದ ವಾರ್ಷಿಕ ಮಹಾಸಭೆ

Update: 2019-07-18 16:34 GMT

ಮಂಗಳೂರು, ಜು.18: ಬಂಟರ ಸಂಘ ಜಪ್ಪಿನಮೊಗರು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಜು.21ರಂದು ಬೆಳಗ್ಗೆ 10:30ಕ್ಕೆ ಸಂಘದ ಸಭಾಂಗಣದಲ್ಲಿ 28ನೇ ವಾರ್ಷಿಕ ಮಹಾಸಭೆ ಆಟಿದ ಕೂಟ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮವನ್ನು ಕಾರ್ ಡೆಕರರ್ಸ್ ಮಂಗಳೂರು ಇದರ ಮಾಲಕ ಮುಕೇಶ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಜಪ್ಪಿನಮೊಗರು ಅಧ್ಯಕ್ಷ ಹರೀಶ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಎಜಿಎಂ ಟೈಮ್ಸ್ ಆಫ್ ಇಂಡಿಯಾದ ಕದ್ರಿ ನವನೀತ್ ಶೆಟ್ಟಿ ಆಟಿ ಆಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕಂರ್ಬಿಸ್ಥಾನ ವೈದ್ಯನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಅನಿಲ್ ಶೆಟ್ಟಿ ಮನ್ಕುತೋಟಗುತ್ತು, ಮನಪಾ ಮಾಜಿ ಸದಸ್ಯ ಸುರೇಂದ್ರ ಹಳೆಮನೆ, ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ರಾಜಗೋಪಾಲ ರೈ, ಮೈತ್ರಿ ಹಾರ್ಡ್‌ವೇರ್ ಮಂಗಳೂರು ಮಾಲಕ ಪ್ರವೀಣ್ ಆಳ್ವ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಮಾಜಿಕ, ಸಹಕಾರ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ‘ಬಂಟರ ಕಣ್ಮಣಿ’ ಬಿರುದು ನೀಡಿ ಸನ್ಮಾನಿಸಲಾಗುವುದು.

ಮನಪಾ ಮಾಜಿ ಸದಸ್ಯ ಜೆ.ಸುರೇಂದ್ರ ಹಳೆಮನೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News