ವಿಪ್ ಕುರಿತು ಸ್ಪಷ್ಟನೆ ಸಿಗುವವರೆಗೆ ಕಲಾಪ ಮುಂದುವರೆಕೆ: ದಿನೇಶ್‌ ಗುಂಡೂರಾವ್

Update: 2019-07-18 17:34 GMT

ಬೆಂಗಳೂರು, ಜು.18: ‘ವಿಪ್’ ಕುರಿತಂತೆ ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡುವವರೆಗೆ ಕಲಾಪ ಮುಂದುವರೆಯಲಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರು ಸದನಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ. ಆದರೆ, ನಮ್ಮ ಸದಸ್ಯರಿಗೆ ವಿಪ್ ನೀಡುವ ನಮ್ಮ ಅಧಿಕಾರದ ಕುರಿತು ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶದಲ್ಲಿ ಗೊಂದಲವಿದೆ. ಇದು ಸ್ಪಷ್ಟ ಆಗುವವರೆಗೆ ಕಲಾಪ ಮುಂದುವರೆಯಲಿದೆ ಎಂದು ಸ್ಪಷ್ಟ ಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News