ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
Update: 2019-07-18 18:40 GMT
ಬೆಂಗಳೂರು, ಜು.18: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಾಣದ ಹಂಗನ್ನು ತೊರೆದು ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಂದ ‘ಕೆಳದಿ ಚೆನ್ನಮ್ಮ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಕರಣವು ಆಗಸ್ಟ್ 2018 ರಿಂದ ಜುಲೈ 2019 ರೊಳಗೆ ನಡೆದಿರಬೇಕು. ಅರ್ಜಿಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು ಜು.31 ರೊಳಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.