ರಾಜ್ಯಪಾಲರ ವರ್ತನೆ ಬಿಜೆಪಿ ಏಜೆಂಟ್ ರೀತಿಯಿದೆ: ವೇಣುಗೋಪಾಲ್

Update: 2019-07-19 05:39 GMT

ಬೆಂಗಳೂರು, ಜು.19: ‘‘ಕರ್ನಾಟಕ ರಾಜ್ಯಪಾಲರು ಬಿಜೆಪಿ ಏಜೆಂಟ್ ಥರ ವರ್ತಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಗೆ ರಾಜ್ಯಪಾಲರು ಬರೆದಿರುವ ಪತ್ರದ ಬಗ್ಗೆ ನಾವೂ ಕಾನೂನು ಸಲಹೆ ತೆಗೆದುಕೊಳ್ಳುತ್ತೇವೆ. ರಾಜ್ಯಪಾಲರಿಗೆ ಆ ಅಧಿಕಾರವಿಲ್ಲ. ಕುಮಾರಸ್ವಾಮಿ ಅವರು ಸದನದಲ್ಲಿ ಮೊದಲ ಬಾರಿ ವಿಶ್ವಾಸಮತ ಕೇಳುವ ವಿಚಾರ ಪ್ರಸ್ತಾಪಿಸಿದಾಗ ಇದ್ದ ಪರಿಸ್ಥಿತಿಗೂ, ಈಗ ಇರುವ ಪರಿಸ್ಥಿತಿಗೂ ವ್ಯತ್ಯಾಸವಿದೆ. ಸುಪ್ರೀಂಕೋರ್ಟ್ ತೀರ್ಪಿನ ಕಾರಣ ವಿಪ್ ಜಾರಿ ಬಗ್ಗೆ ಗೊಂದಲ ಉಂಟಾಗಿದೆ’’ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಪ್ರತಿಕ್ರಿಯೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News