ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಹತ್ಯೆ

Update: 2019-07-19 18:09 GMT

ಮಂಡ್ಯ, ಜು.19: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ಕೊಲೆಯಾಗಿರುವರು.

ಎರಡು ದಿನಗಳಿಂದ ಮನೆಗೆ ಬೀಗ ಹಾಕಿದ ಸ್ಥಿತಿಯಲ್ಲಿದ್ದಾಗ ಅಕ್ಕಪಕ್ಕದ ಮನೆಯವರು ಕಿಟಕಿಯಲ್ಲಿ ನೋಡಿದಾಗ ದಂಪತಿ ಬರ್ಬರವಾಗಿ ಕೊಲೆಯಾಗಿರುವುದು ಕಂಡುಬಂದಿದೆ.

ಗ್ರಾಮಸ್ಥರಿಂದ ವಿಷಯ ತಿಳಿದ ಕೂಡಲೇ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ, ಶವ ಪರೀಕ್ಷೆ ನಡೆಸಲಾಯಿತು.

ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್, ಸಬ್‍ಇನ್ಸ್‍ಪೆಕ್ಟರ್ ವೆಂಕಟೇಶ್, ಜಿಪಂ ಸದಸ್ಯ ಎಚ್.ಜಿ.ಮಂಜು, ಗ್ರಾಪಂ ಸದಸ್ಯ ಆರ್.ಎನ್.ದೇವಾನಂದ್ ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News