ಕಣಚೂರು: ವಿದ್ಯಾರ್ಥಿ ಸಂಘದ ಉದ್ಘಾಟನೆ

Update: 2019-07-20 18:25 GMT

ಕೊಣಾಜೆ: ಕಣಚೂರು ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಣಚೂರು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. 

ಕಾರ್ಯಕ್ರಮದ ಅತಿಥಿಯಾಗಿ ಕಣಚೂರು ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷರಾಗಿರುವ ವಿಶ್ರಾತ ಕುಲಪತಿ ಪ್ರೊ. ಅಬ್ದುಲ್ ರೆಹಮಾನ್‍ರವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದ ಬಳಕೆಯನ್ನು ದುರುಪಯೋಗಿಸದೆ ಉತ್ತಮ ರೀತಿಯಲ್ಲಿ ಶಿಕ್ಷಣದಲ್ಲಿ ಸದುಪಯೊಗಪಡಿಸಿಕೊಂಡು, ಉನ್ನತ ಶಿಕ್ಷಣವನ್ನು ಪಡೆದು ನಿಮ್ಮ ಗುರಿಯನ್ನು ಸಾಧಿಸಿ ಎಂದು ಹಾರೈಸಿದರು. 

ಕಣಚೂರು ಸಂಸ್ಥೆಯ ಸಂಚಾಲಕರಾದ ಅಬ್ದುಲ್ ರೆಹಮಾನ್ ವಿದ್ಯಾರ್ಥಿನಿಯರನ್ನು ಕುರಿತು, ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಜವಾಬ್ದಾರಿಯನ್ನು ಅರಿತು ಅದನ್ನು ಕ್ರಮಬದ್ದವಾಗಿ ಪಾಲಿಸಿದಾಗ ಮಾತ್ರ ಉತ್ತಮ ಬದುಕನ್ನು ನಡೆಸಲು ಸಾಧ್ಯ ಎಂದರು.  

ಕಾಲೇಜಿನ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಾದ, ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ತೃತಿಯ ಬಿ.ಕಾಂ ವಿದ್ಯಾರ್ಥಿನಿ ಅರ್‍ಫೀನಾ, ಕಾರ್ಯದರ್ಶಿಯಾಗಿ ತೃತಿಯ ಬಿ.ಸಿ.ಎ ವಿದ್ಯಾರ್ಥಿನಿ ಆಯಿಶಾ ಮನಾಲ್, ಸಹ ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಕುರುವತುಲ್ ಐನ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ತೃತಿಯ ಬಿ.ಸಿ.ಎ ವಿದ್ಯಾರ್ಥಿನಿ ಶಿರಿನ್ ಸುಲ್ತಾನ್,  ಕ್ರೀಡಾ ಕಾರ್ಯದರ್ಶಿ ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ಸುರಯ್ಯ ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಇಕ್ಬಾಲ್ ಅಹಮ್ಮದ್ ಯು.ಟಿ ರವರು ಪ್ರಮಾಣ ವಚನ ಭೋಧಿಸಿದರು.

ಕಣಚೂರು  ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ, ಕಣಚೂರು ಹೈಸ್ಕೂಲ್‍ನ ಪ್ರಾಂಶುಪಾಲೆ ವಿನಿತಾ ಗಾಮಾ, ಕಣಚೂರು ಪಬ್ಲಿಕ್ ಸ್ಕೂಲ್‍ನ ಪ್ರಾಂಶುಪಾಲೆ ಅನಂದಿ, ಕಣಚೂರು ಪ್ರೀ ಪ್ರೈಮರಿಯ ಪ್ರಾಂಶುಪಾಲೆ ಲಿನೆಟ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಗ್ಲೀಷ್  ವಿಭಾಗದ ಉಪನ್ಯಾಸಕಿ ಮುಬಿನ್‍ ತಾಜ್ ಕಾರ್ಯಕ್ರಮವನ್ನು ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಮಾನಸ ಸ್ವಾಗತಿಸಿದರು. ತೃತಿಯ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಅರ್‍ಫೀನಾ ವ0ದಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News