ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಜೆಡಿಎಸ್ ಕಾರ್ಯಕರ್ತನ ವಿರುದ್ಧ ದೂರು

Update: 2019-07-20 18:44 GMT

ಮಂಡ್ಯ, ಜು.20: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ವ್ಯಕ್ತಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಿದ್ದಾರೆ.

ಮದ್ದೂರು ತಾಲೂಕು ಮಾಲಗಾರನಹಳ್ಳಿಯ ಜೆಡಿಎಸ್ ಕಾರ್ಯಕರ್ತ ಶಿವಣ್ಣಗೌಡ ಅವರು ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಇತರೆ ಬಿಜೆಪಿ ಮುಖಂಡರನ್ನು ಅವಹೇಳನ ಮಾಡಿದ್ದಾರೆಂದು ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ್, ನೆರಳು ಕೃಷ್ಣ, ರೇಣುಕಸ್ವಾಮಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News