ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಲಿ: ಯಡಿಯೂರಪ್ಪ ಒತ್ತಾಯ

Update: 2019-07-21 07:31 GMT

ಬೆಂಗಳೂರು, ಜು.21: ಶಾಸಕರ ಮೇಲೆ ವಿಪ್ ಜಾರಿ ಮಾಡಿದರೆ ಪರಿಣಾಮ ಆಗಲ್ಲ. ನಾಳೆ ಸಂಜೆಯವರೆಗೆ ಎಲ್ಲ ಮುಗಿಯುವ ಭರವಸೆ ಇದೆ. ಈಗಲಾದರೂ ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಲಿ. ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

 ಧವಳಗಿರಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರ ಗಮನ ನಾಳೆ ಸುಪ್ರೀಂಕೋರ್ಟ್ ಏನ್ ತೀರ್ಪು ಕೊಡಬಹುದು ಅನ್ನೋದರ ಮೇಲಿದೆ. ಈಗಾಗಲೇ ಸುಪ್ರೀಂಕೋರ್ಟ್ ಶಾಸಕರಿಗೆ ಸದನಕ್ಕೆ ಬರಬೇಕು ಅಂತ ಬಲವಂತ ಮಾಡಬಾರದು ಅಂತ ಹೇಳಿದೆ ಎಂದರು.

 ನಾಳೆ ವಿಶ್ವಾಸ ಮತ ಮಾಡುವ ಭರವಸೆಯನ್ನು ಸ್ಪೀಕರ್ ಮತ್ತು ಸಿಎಂ ಕೊಟ್ಟಿದ್ದಾರೆ. ಇನ್ನು ಯಾವುದೇ ಕಾರಣಕ್ಕೂ ಕುಮಾರಸ್ವಾಮಿ ವಿಳಂಬ ಮಾಡಬಾರದು. ವಿಳಂಬ ಮಾಡಿದ್ರೆ ಪ್ರಜಾತಂತ್ರಕ್ಕೆ ದ್ರೋಹ ಮಾಡಿದಂತಾಗುತ್ತದೆ. ನಾವು ನಾಳೆವರೆಗೆ ಕಾದು ನೋಡ್ತೇವೆ ಯಡಿಯೂರಪ್ಪ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News