ಪುತ್ತೂರು: ಮನೆಯಿಂದ ಚಿನ್ನಾಭರಣ ಕಳವು

Update: 2019-07-21 13:17 GMT

ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ನಗ ಮತ್ತು ನಗದು ಕಳವು ನಡೆಸಿದ ಘಟನೆ ಶನಿವಾರ ರಾತ್ರಿ  ಪುತ್ತೂರು ತಾಲೂಕಿನ ಬನ್ನೂರು ಜೈನರಗುರಿ ಎಂಬಲ್ಲಿ ನಡೆದಿದ್ದು, ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. 

ನಗರದ ಜ್ಯುವೆಲ್ಲರಿಯೊಂದರ ಮಾಲಕ ರಾಜ್ ಎಂಬವರ ಬನ್ನೂರು ಜೈನರಗುರಿ ಎಂಬಲ್ಲಿರುವ ಮನೆಯಿಂದ ಕಳವು ನಡೆಸಲಾಗಿದೆ. ಮನೆಯ ಒಳನುಗ್ಗಿದ ಕಳ್ಳರು ಕಪಾಟಿನಲ್ಲಿ ಇರಿಸಲಾಗಿದ್ದ ಸುಮಾರು ಐದೂವರೆ ಪವನ್ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. 

ಶನಿವಾರ ರಾಜ್ ಮತ್ತು ಅವರ ಕುಟುಂಬಸ್ಥರು ಮನೆಗೆ ಬೀಗ ಹಾಕಿ ಉಪ್ಪಿನಂಗಡಿಯಲ್ಲಿರುವ ತಮ್ಮ ಸಹೋದರಿಯ ಮನೆಗೆ ತೆರಳಿದ್ದರು. ರವಿವಾರ ಬೆಳಗ್ಗೆ ಬಂದ ಸಂದರ್ಭದಲ್ಲಿ ಕಳವು ಪ್ರಕರಣ ಬೆಳಕಿಗೆ ಬಂದಿದೆ. 

ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News