ಬಿಜೆಪಿಯಿಂದ ನನಗೂ ಆಫರ್ ಬಂದಿತ್ತು: ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ

Update: 2019-07-21 15:53 GMT

ಮಂಡ್ಯ, ಜು.21: ಬಿಜೆಪಿಯಿಂದ ನನಗೂ ಆಫರ್ ಬಂದಿತ್ತು. ಆದರೆ, ನಾನು ಕಲ್ಲುಬಂಡೆ ಇದ್ದಂತೆ, ಅದಕ್ಕೆಲ್ಲಾ ಕರಗಲಿಲ್ಲ ಎಂದು ಮಳವಳ್ಳಿ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ ಹೇಳಿದ್ದಾರೆ.

ಮಳವಳ್ಳಿ ಪಟ್ಟಣದ ರೈತ ಸಮುದಾಯ ಭವನದಲ್ಲಿ ರವಿವಾರ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ವಿಶ್ವಾಸ ಮತ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ರೆಸಾರ್ಟ್‍ನಿಂದ ಓಡಿ ಬಂದಿಲ್ಲ. ಸಿಎಂ ಕುಮಾರಸ್ವಾಮಿ ಅವರು ಅನುಮತಿ ಪಡೆದು ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ ಅವರು, ಸ್ಪೀಕರ್ ತೀರ್ಮಾನವೇ ಅಂತಿಮವಾದ್ದರಿಂದ ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ ಇಲ್ಲ ಎಂದರು.

ಅತೃಪ್ತ ಶಾಸಕರನ್ನು ಮುಂಬೈನಲ್ಲಿ ಬಂಧನದಲ್ಲಿಟ್ಟಿರುವುದು ಸತ್ಯ. ಒತ್ತಡ ಇರುವುದರಿಂದ ಅವರು ಸುಳ್ಳು ಹೇಳುತ್ತಿದ್ದಾರೆ. ಅವರೆಲ್ಲರೂ ಸರಕಾರದ ಪರವಾಗಿ ಇದ್ದಾರೆ. ಅವರಿಗೆ ಮತ ಚಲಾಯಿಸಲು ಅವಕಾಶ ನೀಡಲಿ. ಬೇಕಾದರೆ ಅವರೇ(ಬಿಜೆಪಿ) ಮತ ಹಾಕಿಸಿಕೊಳ್ಳಲಿ ಎಂದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News