×
Ad

ಬಿಎಂಟಿಸಿ ಬಸ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು

Update: 2019-07-21 21:29 IST

ಬೆಂಗಳೂರು, ಜು.21: ಬಿಎಂಟಿಸಿ ಬಸ್‌ಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಸುಬ್ಬಯ್ಯನಪಾಳ್ಯದ ತರುಣ್‌ ದರ್ಶನ್(20) ಎಂಬಾತ ಮೃತಪಟ್ಟ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ಖಾಸಗಿ ಕಾಲೇಜಿನಲ್ಲಿ 2ನೆ ವರ್ಷದ ಬಿಕಾಂ ಪದವಿ ಓದುತ್ತಿದ್ದ ತರುಣ್ ದರ್ಶನ್, ಶನಿವಾರ ಮಧ್ಯಾಹ್ನ 1:20ರ ಸುಮಾರಿಗೆ ಶೈಕ್ಷಣಿಕ ದಾಖಲೆ ಪತ್ರಗಳನ್ನು ಪಡೆಯುವ ಸಲುವಾಗಿ ಕಾಲೇಜಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಎನ್ನಲಾಗಿದೆ.

ಮಾರ್ಗಮಧ್ಯೆ ಹೆಣ್ಣೂರು ಗೆದ್ದಲಹಳ್ಳಿ ರಸ್ತೆಯಲ್ಲಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿರುವ ಬಾಣಸವಾಡಿ ಸಂಚಾರ ಠಾಣಾ ಪೊಲೀಸರು, ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News