ರಾಜ್ಯದ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ನೇರ ಹೊಣೆ: ಶಾಸಕ ತನ್ವೀರ್ ಸೇಠ್ ಆಕ್ರೋಶ

Update: 2019-07-21 18:12 GMT

ಮೈಸೂರು,ಜು.21: ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ನೇರ ಹೊಣೆ. ಅವರು ಅಧಿಕಾರ ದಾಹದಿಂದ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುತ್ತಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಅಧಿಕಾರದ ಅಮಲು ತಲೆಗೇರಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಅವರೇ ಹೊಣೆಗಾರರು. ಕಲಾಪವನ್ನು ಕಾಲಹರಣ ಮಾಡುವ ಅವಶ್ಯಕತೆ ಇಲ್ಲ. ಸುಪ್ರೀಂ ಕೋರ್ಟ್‍ನ ಆದೇಶ ತೃಪ್ತಿದಾಯಕ ಅಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಯ ಅವಶ್ಯಕತೆ ಇದೆ. ಬಿಜೆಪಿಯವರು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚರ್ಚೆಯ ನಂತರ ವಿಶ್ವಾಸ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು.

ಸಚಿವ ಸಾ.ರಾ.ಮಹೇಶ್ ಹಾಗೂ ಶಾಸಕ ಎಚ್.ವಿಶ್ವನಾಥ್ ಅವರದು ವೈಯಕ್ತಿಕ ವಿಚಾರ. ಆದರೆ ಹಿರಿಯ ನಾಯಕರನ್ನು ತೇಜೋವದೆ ಮಾಡಬಾರದು. ರಾಜಕೀಯ ಭಿನ್ನಾಬಿಪ್ರಾಯ ಇದ್ದರೂ ಈ ರೀತಿ ಮಾತನಾಡಬಾರದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News