ಕಲ್ಲಮುಂಡ್ಕೂರಿನಲ್ಲಿ ಗಿಡ ನೆಡುವ ಕಾರ್ಯಕ್ರಮ

Update: 2019-07-21 18:16 GMT

ಮೂಡುಬಿದಿರೆ: ಆಳ್ವಾಸ್‍ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮೂಡುಬಿದಿರೆ ವಲಯ ಅರಣ್ಯ ಇಲಾಖೆ ಇವುಗಳ ಸಹಯೋಗದಲ್ಲಿ ಪರಿಸರ ದಿನದ ಪ್ರಯುಕ್ತ ಕಲ್ಲಮುಂಡ್ಕೂರು ಅರಣ್ಯ ಪ್ರದೇಶದಲ್ಲಿ ಗಿಡ ನೆಡುವ ಮತ್ತು ಬೀಜ ಬಿತ್ತುವ ಕಾರ್ಯಕ್ರಮವು ಭಾನುವಾರ ನಡೆಯಿತು. 

ಉಪವಲಯಾರಣ್ಯಾಧಿಕಾರಿಗಳಾದ ಅಶ್ವಿತ್ ಗಟ್ಟಿ, ಶಂಕರ್, ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ವಸಂತ್, ಕಾರ್ಯದರ್ಶಿ ವಿನೋದ್ ಮತ್ತು ಸ್ವಯಂ ಸೇವಕರುಗಳು ಈ ಸಂದರ್ಭದಲ್ಲಿದ್ದರು. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News