ನಾಗೇಶ್ ಪಡು ಮೃತ್ಯು ಜಿಲ್ಲಾಡಳಿತಕ್ಕೆ ಎಚ್ಚರಿಕೆ ಗಂಟೆಯಾಗಲಿ: ಫಾರೂಕ್ ಉಳ್ಳಾಲ್

Update: 2019-07-22 06:10 GMT

ಮಂಗಳೂರು, ಜು.22: ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಡೆಂಗ್ ಗೆ ಖಾಸಗಿ ಸುದ್ದಿವಾಹಿನಿಯ ಕ್ಯಾಮರಾಮ್ಯಾನ್ ನಾಗೇಶ್ ಪಡು ಅವರು ಬಲಿಯಾಗಿರುವುದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ಗಂಟೆಯಾಗಲಿ. ಸಾಕ್ರಾಮಿಕ ರೋಗಗಳ ಮೂಲೋತ್ಪಾಟನೆಗೆ ತುರ್ತು ಕ್ರಮ ಕೈಗೊಳ್ಳಲಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ಫಾರೂಕ್ ಉಳ್ಳಾಲ್ ಒತ್ತಾಯಿಸಿದ್ದಾರೆ.

ನಾಗೇಶ್ ಅವರ ಸಾವು ಆಘಾತವಷ್ಟೇ ಅಲ್ಲ, ನಮ್ಮ ವ್ಯವಸ್ಥೆಯ ಅಚಾತುರ್ಯ ಮತ್ತು ಉದಾಸೀನತೆಯ ಬಗ್ಗೆ ಅಪರಾಧ ಪ್ರಜ್ಞೆ ಕಾಡುವಂತೆ ಮಾಡಿದೆ. ಈ ಸಾವಿನಲ್ಲಿ ನಮ್ಮ ಸಾಮಾಜಿಕ ಹೊಣೆಗಾರಿಕೆಯ ವೈಫಲ್ಯವೂ ಅಡಗಿದೆ. ಈ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವಂತಾಗಬೇಕು ಎಂದವರು ಹೇಳಿಕೆಯಲ್ಲಿ ಅಭಿಪ್ರಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News