ಎದೆನೋವಿಗಾಗಿ ಎರಡೆರಡು ತಪಾಸಣೆಗೆ ಒಳಗಾದ ಮನ್ಸೂರ್ ಖಾನ್

Update: 2019-07-22 15:09 GMT

ಬೆಂಗಳೂರು, ಜು.22: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಈಡಿ ವಶದಲ್ಲಿರುವ ಪ್ರಮುಖ ಆರೋಪಿ ಮನ್ಸೂರ್ ಖಾನ್‌ಗೆ ಸತತ ಎರಡು ಬಾರಿ ಎದೆನೋವು ಕಾಣಿಸಿಕೊಂಡಿದ್ದು, ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರು.

ಸೋಮವಾರ ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆ ಮನ್ಸೂರ್‌ನನ್ನು ಕರೆದೊಯ್ದ ಈಡಿ ಅಧಿಕಾರಿಗಳು, ತಪಾಸಣೆಗೆ ಒಳಪಡಿಸಿ, ಚಿಕಿತ್ಸೆ ನೀಡಲಾಯಿತು. ತದನಂತರ, ವಾಪಸ್ ಶಾಂತಿನಗರ ಈಡಿ ಕಚೇರಿಗೆ ಕರೆತರಲಾಯಿತು ಎಂದು ತಿಳಿದುಬಂದಿದೆ.

ದಾಖಲು: ಎದೆ ನೋಯುತ್ತಿದೆ ಎಂದು ನರಳಾಡಿದ್ದರಿಂದಾಗಿ ರವಿವಾರ ಜಯದೇವ ಆಸ್ಪತ್ರೆಗೆ ಕರೆತಂದು ತಪಾಸಣೆಗೆ ಒಳಪಡಿಸಲಾಯಿತು. ಬಳಿಕವೂ ಎದೆ ನೋವು ಕಾಣಿಸಿಕೊಂಡಿದೆ ಎಂದು ನರಳಲು ಆರಂಭಿಸಿದ್ದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದರು.

ತಪಾಸಣೆ ನಡೆಸಿದ ವೈದ್ಯರು, ಯಾವುದೇ ತೊಂದರೆ ಕಾಣಿಸುತ್ತಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಆರೋಪಿ, ಎದೆನೋವು ಎಂದು ನಾಟಕವಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News