ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2019-07-22 17:10 GMT

ಉಡುಪಿ, ಜು.22: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಜು.24ರಂದು ಬೆಳಿಗ್ಗೆ 11 ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಜು.25ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ ಹಾಗೂ ಜು.26ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದು. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ: 0820-2527770/2536661 ಅನ್ನು ಸಂಪರ್ಕಿಸುವಂತೆ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News