ಲಾರಿಗೆ ಬೈಕ್ ಢಿಕ್ಕಿ: ಯೋಗ ಶಿಕ್ಷಕ ಮೃತ್ಯು

Update: 2019-07-22 18:40 GMT

ಬೆಂಗಳೂರು, ಜು.22: ಲಾರಿಯೊಂದಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಯೋಗ ಶಿಕ್ಷಣ ಕೇಂದ್ರದ ಪ್ರಾಧ್ಯಾಪಕರೊಬ್ಬರು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಜಿಗಣಿಯ ವಿವೇಕಾನಂದ ಯೋಗ ವಿಶ್ವವಿದ್ಯಾನಿಲಯ ಶಿಕ್ಷಣ ಕೇಂದ್ರದ ಪ್ರಾಧ್ಯಾಪಕ ಆದಿತ್ಯ ಶೆಟ್ಟಿ (22) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ ಮೂಲದ ಆದಿತ್ಯ ಶೆಟ್ಟಿ ಶಿಕ್ಷಣ ಕೇಂದ್ರದ ವಸತಿ ನಿಲಯದಲ್ಲಿಯೇ ವಾಸಿಸುತ್ತಿದ್ದರು. ಕನಕಪುರದಿಂದ ಬನ್ನೇರುಘಟ್ಟ ಕಡೆಗೆ ಹೋಗುವ ನೈಸ್ ರಸ್ತೆಯಲ್ಲಿ ರವಿವಾರ ಸಂಜೆ 4:30ರ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಆದಿತ್ಯ ಶೆಟ್ಟಿ ಮುಂದೆ ಸಾಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News