ವಿಶ್ವಾಸಮತದಲ್ಲಿ ಸೋಲು: ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ
Update: 2019-07-23 17:26 GMT
ಬೆಂಗಳೂರು, ಜು.19: ಬಹಳ ಕುತೂಹಲ ಕೆರಳಿಸಿದ್ದ ವಿಶ್ವಾಸಮತ ಯಾಚನೆಯಲ್ಲಿ ಮೈತ್ರಿ ಸರಕಾರ ಸೋಲುಂಡ ಪರಿಣಾಮ ಮೈತ್ರಿ ಬೆಂಬಲದೊಂದಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದ ಎಚ್.ಡಿ ಕುಮಾರಸ್ವಾಮಿ, ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಮಂಗಳವಾರ ಸಂಜೆ ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಸೋಲುಂಡು, ಸದನದ ವಿಶ್ವಾಸ ಕಳೆದುಕೊಂಡ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ ಕುಮಾರಸ್ವಾಮಿ ರಾಜೀನಾಮೆ ಪತ್ರವನ್ನು ರಾಜ್ಯಪಾಲ ವಜುಬಾಯಿ ರುಡಬಾಯಿ ವಾಲಾ ಗೆ ಸಲ್ಲಿಸಿದರು.