Breaking News: ಬಿಎಸ್ಪಿ ಶಾಸಕ ಎನ್.ಮಹೇಶ್ ಅಮಾನತು
Update: 2019-07-23 15:18 GMT
ಬೆಂಗಳೂರು, ಜು.23: ಮೈತ್ರಿ ಸರಕಾರದ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದ ರಾಜ್ಯದ ಏಕೈಕ ಬಿಎಸ್ಪಿ ಶಾಸಕ ಎನ್.ಮಹೇಶ್ ರನ್ನು ಅಮಾನತು ಮಾಡಲಾಗಿದೆ.
ಬಿಎಸ್ಪಿ ವರಿಷ್ಟೆ ಮಾಯಾವತಿ ಅವರ ಸೂಚನೆಯನ್ನು ಕಡೆಗಣಿಸಿ ವಿಶ್ವಾಸಮತ ಯಾಚನೆ ಪ್ರಕ್ರಿಯೆಗೆ ಗೈರು ಹಾಜರಾಗಿದ್ದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ರನ್ನು ಅಮಾನತು ಮಾಡಿದ್ದಾಗಿ ಮಾಯಾವತಿ ಟ್ವೀಟ್ ಮೂಲಕ ತಿಳಿಸಿದ್ದಾರೆ.