ಸಂಸದೀಯ ಪ್ರಜಾಪ್ರಭುತ್ವಕ್ಕೆ ಬಿಜೆಪಿ ದ್ರೋಹ ಮಾಡಿದೆ: ಸಿದ್ದರಾಮಯ್ಯ

Update: 2019-07-23 16:46 GMT

ಬೆಂಗಳೂರು, ಜು.23: ಮುಂಬೈನಲ್ಲಿರುವ ಶಾಸಕರು ಬಿಜೆಪಿಯ ಚಿತಾವಣೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಬಂಧನದಲ್ಲಿಟ್ಟು ಇವತ್ತು ಸದನಕ್ಕೆ ಬಾರದಂತೆ ಬಿಜೆಪಿ ಮಾಡಿದೆ. ಇದು ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾಡಿರುವ ದೊಡ್ಡ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಿ.ನಾಗೇಂದ್ರ ಅನಾರೋಗ್ಯದ ಕಾರಣ ಅನುಮತಿ ಪಡೆದು ಸದನಕ್ಕೆ ಗೈರು ಹಾಜರಾಗಿದ್ದರು. ಆದರೆ, ಉಳಿದವರು ಬಿಜೆಪಿಯವರ ಆಸೆ, ಆಮಿಷಗಳಿಗೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.

ವಾಮ ಮಾರ್ಗದಿಂದ, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಷಡ್ಯಂತ್ರವನ್ನು ಬಿಜೆಪಿ ಮಾಡುತ್ತಿದೆ. ಪಕ್ಷಾಂತರವನ್ನು ಪ್ರಚೋದಿಸಿ, ಆಸೆ, ಆಮಿಷಗಳನ್ನು ಒಡ್ಡಿ, ಕುದುರೆ ವ್ಯಾಪಾರ ಮಾಡಿ, ಇವತ್ತು ವಿಶ್ವಾಸಮತ ಯಾಚನೆ ನಿರ್ಣಯ ಬಿದ್ದು ಹೋಗಲು ಕಾರಣಕರ್ತರಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News