ಕಳವು ಪ್ರಕರಣ: ಯುವಕನ ಬಂಧನ, 7.2 ಲಕ್ಷ ರೂ. ಮೌಲ್ಯದ ಬೈಕ್‌ಗಳು ಜಪ್ತಿ

Update: 2019-07-23 18:23 GMT

ಬೆಂಗಳೂರು, ಜು.23: ಬೈಕ್ ಕಳವು ಪ್ರಕರಣ ಸಂಬಂಧ ಯುವಕನೋರ್ವನನ್ನು ಬಂಧಿಸಿರುವ ಇಲ್ಲಿನ ಸಂಜಯನಗರ ಠಾಣಾ ಪೊಲೀಸರು, 7.2 ಲಕ್ಷ ಮೌಲ್ಯದ 7 ಬೈಕ್‌ಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಎಂಎಸ್ ಪಾಳ್ಯದ ನಿವಾಸಿ ಮನೋಜ್‌ ಕುಮಾರ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 30ರಂದು ಇಲ್ಲಿನ ಸಂಜಯನಗರ ಮುಖ್ಯರಸ್ತೆಯ ತಬ್ರೇಝ್ ಎಂಬುವರು ಬೈಕ್ ನಿಲ್ಲಿಸಿ ಹೋಗಿದ್ದರು. ಕೆಲ ಸಮಯದ ನಂತರ ಬಂದು ನೋಡಿದಾಗ ಬೈಕ್ ಕಳವು ಆಗಿತ್ತು. ಈ ಸಂಬಂಧ ಸಂಜಯನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನನ್ವಯ ತನಿಖೆ ನಡೆಸಿದಾಗ ಆರೋಪಿ ಮನೋಜ್ ಕುಮಾರ್ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಏಳು ಬೈಕ್‌ಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ. ಈಗಾಗಲೇ ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News