ಮೈತ್ರಿ ಸರಕಾರ ಪತನ

Update: 2019-07-23 18:24 GMT

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸಮತ ಯಾಚನೆ ನಿರ್ಣಯದ ಮತದಾನದಲ್ಲಿ ಸೋಲುವ ಮೂಲಕ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರದ 14 ತಿಂಗಳ ಆಡಳಿತ ಅಂತ್ಯಗೊಂಡಿದೆ. ವಿಶ್ವಾಸಮತ ಯಾಚನೆ ನಿರ್ಣಯದ ಪರವಾಗಿ 99 ಹಾಗೂ ವಿರುದ್ಧವಾಗಿ 105 ಮತಗಳು ಚಲಾವಣೆಗೊಂಡವು. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಿರ್ಣಯ ಬಿದ್ದು ಹೋದ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ ಕುಮಾರಸ್ವಾಮಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor