ಲಯನ್ಸ್ ಕ್ಲಬ್ ಚೇತನ ಪದಾಧಿಕಾರಿಗಳ ಪದಗ್ರಹಣ

Update: 2019-07-24 12:23 GMT

ಉಡುಪಿ, ಜು.24: ಲಯನ್ಸ್ ಕ್ಲಬ್ ಉಡುಪಿ ಚೇತನ ಇದರ ಪದಗ್ರಹಣ ಸಮಾರಂಭವು ಶನಿವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ದಲ್ಲಿ ಜರಗಿತು.

ಮಾಜಿ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ನೂತನ ಅಧ್ಯಕ್ಷ ಅರುಣ್ಕುಮಾರ್ ಶೆಟ್ಟಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್, ಖಜಾಂಜಿಯಾಗಿ ಸುದರ್ಶನ್ ಪ್ರಮಾಣವಚನ ಸ್ವೀಕರಿಸಿದರು. ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಅಧಿಕಾರ ಹಸ್ತಾಂತರಿಸಿದರು.

ಸೇವಾ ಕಾರ್ಯ ರೂಪದಲ್ಲಿ ಹಿರೇಬೆಟ್ಟು ಖಾಸಗಿ ಹಿರಿಯ ಪ್ರಾಥಮಿಕ ಶಾಲೆಗೆ ಧನಸಹಾಯ, ಹರ್ಷಿತಾ ಆಳ್ವ ಅವರ ಉನ್ನತ ವ್ಯಾಸಂಗಕ್ಕೆ ಧನ ಸಹಾಯ, ಡಯಾಲಿಸಿಸ್ ಚಿಕಿತ್ಸೆಗಾಗಿ ರಾಜೇಶ್ ನಾಯಕ್‌ಗೆ ಸಹಾಯಧನ, ಎಸೆಸೆಲ್ಸಿ ರ್ಯಾಂಕ್ ವಿಜೇತೆ ಅಲೆವೂರಿನ ಅಂಕಿತ ಆಚಾರ್ಯ ಇವರಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿಶೇಷ ಸೇವೆಗಾಗಿ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ದಂಪತಿಯನ್ನು ಗೌರವಿಸಲಾಯಿತು. ಕಾರ್ಯದರ್ಶಿ ರತ್ನಾಕರ್ ಶೆಟ್ಟಿ, ವಲಯ ಅಧ್ಯಕ್ಷ ಜಗನ್ನಾಥ್ ಕಡೆಕಾರ್, ಶೋಭಾ ಶೆಟ್ಟಿ, ಸಂಜೀವ ಕರ್ಕೇರಾ, ನಂದಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News