ಶಾಲಾ ಮಕ್ಕಳ ಚಾಲಕರ ಸಂಘದಿಂದ ಶ್ರಮದಾನ
Update: 2019-07-24 18:56 IST
ಮಂಗಳೂರು, ಜು.24: ದ.ಕ.ಜಿಲ್ಲಾ ಶಾಲಾ ಮಕ್ಕಳ ಚಾಲಕರ ಸಂಘ (ರಿ)ದ ವತಿಯಿಂದ ಕೋಡಿಕಲ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಸರು ತುಂಬಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುವುದನ್ನು ಗಮನಿಸಿ ಸಂಘದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಜರುಗಿತು.
ಸಂಘದ ಪದಾಧಿಕಾರಿಗಳಾದ ಮೋಹನ್ ಅತ್ತಾವರ, ಕುಮಾರ್ ಮಾಲೆಮಾರ್, ಕಿರಣ್ ಲೇಡಿಹಿಲ್, ರೆಹಮಾನ್ ಖಾನ್ ಕುಂಜತ್ತಬೈಲ್, ಸತೀಶ್ ಪೂಜಾರಿ, ಶಂಕರ್ ಶೆಟ್ಟಿ, ಚರಣ್, ರಾಘವೇಂದ್ರ, ನಟೇಶ್, ದಿನೇಶ್, ಮಹೇಶ್, ನರೇಂದ್ರ, ಹರೀಶ್, ನವೀನ್, ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.