ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬಿದ್ದ ಎಎಸ್ಸೈ

Update: 2019-07-24 17:44 GMT

ಬೆಂಗಳೂರು, ಜು.24: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಕರೆತಂದಿದ್ದ ಯುವಕನೋರ್ವನನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಪೊಲೀಸ್ ಎಎಸ್ಸೈ ಎಸಿಬಿ ಬಲೆಗೆ ಬಿದಿದ್ದಾರೆ.

ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆ ಎಎಸ್ಸೈ ಶ್ರೀನಿವಾಸ್ ಎಂಬಾತನ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ಏನಿದು ಪ್ರಕರಣ?: ನಗರದ ನಿವಾಸಿಯೊಬ್ಬರ ಮಗನನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅನುಮಾನದ ಮೇಲೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಲಾಗಿತ್ತು. ಬಳಿಕ ಅವರನ್ನು ಠಾಣೆಯಿಂದ ಬಿಡುಗಡೆ ಮಾಡುವ ಸಲುವಾಗಿ ಆರೋಪಿ ಶ್ರೀನಿವಾಸ್ 40 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ.

ಈ ಸಂಬಂಧ ದೂರಿನ್ವಯ ಎಸಿಬಿ ಕಾರ್ಯಾಚರಣೆ ನಡೆಸಿದಾಗ ಆರೋಪಿ ಪರ ಬಾಬು ಎಂಬಾತ 22 ಸಾವಿರ ರೂ. ಸ್ವೀಕರಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಎಸಿಬಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News