ಸರಕಾರ ರಚನೆ ಕಸರತ್ತು: ಅಮಿತ್ ಶಾರನ್ನು ಭೇಟಿಯಾದ ರಾಜ್ಯ ಬಿಜೆಪಿ ನಿಯೋಗ

Update: 2019-07-25 05:47 GMT
ಫೋಟೊ ಕೃಪೆ: ANI

ಬೆಂಗಳೂರು, ಜು.25: ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಶಾಸಕರ ನಿಯೋಗವೊಂದು ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ.

ರಾಜ್ಯದಲ್ಲಿ ಸರ್ಕಾರ ರಚಿಸುವ ಕುರಿತು ಮಾತುಕತೆ ನಡೆಸಿದ್ದು, ರಾಜ್ಯದ ಸಮಗ್ರ ಬೆಳವಣಿಗೆ ಕುರಿತು ಚರ್ಚಿಸಿದ್ದಾರೆ.

ನಿಯೋಗದಲ್ಲಿ ಶಾಸಕ ಜೆ.ಮಾಧುಸ್ವಾಮಿ, ಅರವಿಂದ ಲಿಂಬಾವಳಿ ಹಾಗೂ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಸಾಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News