ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಆಹ್ವಾನ ನೀಡಿದ ಬಿ.ಎಸ್.ವೈ

Update: 2019-07-26 05:26 GMT

ಬೆಂಗಳೂರು, ಜು.26: ರಾಜ್ಯಪಾಲರನ್ನು ಭೇಟಿ ಮಾಡಿ ಸಮಯ ಕೇಳಿದ್ದು 6 ರಿಂದ 6:15ರ ಒಳಗೆ ಪ್ರಮಾಣ ವಚನ ಸ್ವೀಕರಿಸಲು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಎಲ್ಲ ಶಾಸಕರು ಹಾಗೂ ಹಂಗಾಮಿ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತೇನೆ. ಈ ಬಗ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸುತ್ತೇನೆ. ಅಲ್ಲದೆ ಪತ್ರ ಕೂಡಾ ಬರೆಯುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚನೆ ನೀಡಿದ್ದಾರೆ. ಇಂದು ನಾನು ಮತ್ತು ನನ್ನ ಜತೆ ಇನ್ನೂ ಯಾರ್ಯಾರು ಪ್ರಮಾಣ ವಚನ ಸ್ಬೀಕಾರ ಮಾಡಬೇಕೆಂದು ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News