ಮೈತ್ರಿ ಸರಕಾರದಲ್ಲಿ ಅನುಮೋದನೆಗೊಂಡ ವರ್ಗಾವಣೆ, ಹೊಸ ಕಾಮಗಾರಿಗಳಿಗೆ ತಡೆ

Update: 2019-07-26 13:00 GMT

ಬೆಂಗಳೂರು, ಜು. 26: ಮೈತ್ರಿ ಸರಕಾರದಲ್ಲಿ ಜುಲೈನಲ್ಲಿ ಅನುಮೋದನೆಗೊಂಡ ಎಲ್ಲ ಹೊಸ ಕಾಮಗಾರಿಗಳಿಗೆ ಮತ್ತು ವರ್ಗಾವಣೆಗೆ ಸಂಬಂಧಿಸಿದ ಜಾರಿಯಾಗದೆ ಇರುವ ಆದೇಶಗಳಿಗೆ ಮುಂದಿನ ಆದೇಶದ ವರೆಗೂ ತಡೆಹಿಡಿಯಲು ಭಾವೀ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಈ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ ಭಾಸ್ಕರ್ ಸರಕಾರದ ಎಲ್ಲ ಇಲಾಖೆಗಳ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದು, ಭಾವೀ ಮುಖ್ಯಮಂತ್ರಿಗಳ ನಿರ್ದೇಶನವನ್ನು ಪಾಲಿಸಲು ಆದೇಶದಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News