ನೂತನ ಸಿಎಂ ಬಿಎಸ್ವೈಗೆ ಅಮಿತ್ ಶಾ ಅಭಿನಂದನೆ
Update: 2019-07-26 16:24 GMT
ಬೆಂಗಳೂರು, ಜು.26: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಯಡಿಯೂರಪ್ಪ ನೇತೃತ್ವ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಮಾರ್ಗದರ್ಶನದಲ್ಲಿ ಸ್ಥಿರ, ರೈತ ಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ರಾಜ್ಯದಲ್ಲಿ ನೀಡಲಿದ್ದೇವೆ. ನಿಮ್ಮ ನಿರೀಕ್ಷೆಗಳನ್ನು ಬಿಜೆಪಿ ಸರಕಾರ ಪೂರ್ಣಗೊಳಿಸಲಿದೆ ಎಂಬ ನಂಬಿಕೆ ನನಗಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.