ಯಡಿಯೂರಪ್ಪ ನಾಲ್ಕನೇ ಬಾರಿಗೆ ಸಿಎಂ: ಪಾಂಡವಪುರದಲ್ಲಿ ಸಂಭ್ರಮಾಚರಣೆ

Update: 2019-07-27 17:44 GMT

ಪಾಂಡವಪುರ, ಜು.27: ಬಿ.ಎಸ್.ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಪಟ್ಟಣದ ಡಾ.ರಾಜಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು, ಬಿ.ಎಸ್.ಯಡಿಯೂರಪ್ಪ ಅವರ ಭಾವಚಿತ್ರಗಳಿರುವ ಫ್ಲೆಕ್ಸ್ ಗಳನ್ನು ಹಿಡಿದು ಯಡಿಯೂರಪ್ಪ ಅವರ ಪರವಾಗಿ ಘೋಷಣೆ ಕೂಗಿದರು.

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಶುಕ್ರವಾರ ಸಂಜೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು. ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್ ಮಾತನಾಡಿ, ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತಯಾಚನೆ ಮಾಡುವ ವಿಶ್ವಾಸವಿದೆ. ಜಿಲ್ಲೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಪ.ಮ.ರಮೇಶ್, ಮಾಜಿ ಅಧ್ಯಕ್ಷ ಎಸ್.ಮಂಜುನಾಥ್, ಕಣಿವೆ ಮಹೇಶ್, ಹಿರೀಮರಳಿ ಸಂದೇಶ್, ಪುರಸಭೆ ಸದಸ್ಯ ಸ್ಟುಡಿಯೋ ಅಶೋಕ್, ನೀಲನಹಳ್ಳಿ ಧನಂಜಯ, ಹಾರೋಹಳ್ಳಿ ಶ್ರೀಧರ್‍ಗೌಡ, ಎಲೆಕೆರೆ ಧನಂಜಯ, ಬೀರಶೆಟ್ಟಹಳ್ಳಿ ಭಾಸ್ಕರ್, ಹಿರೇಮರಳಿ ಷಣ್ಮುಖ, ಚಿಕ್ಕಾಡೆ ತಿಮ್ಮೇಗೌಡ, ಶ್ರೀನಿವಾಸನಾಯಕ, ಜಯಣ್ಣಚಾರಿ, ವಿಷಕಂಠ, ಎನ್.ಭಾಸ್ಕರ್, ವೇಣು ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News