ಸ್ಪೀಕರ್ ತೀರ್ಪಿನಲ್ಲಿ ಲೋಪ ಎದ್ದು ಕಾಣುತ್ತಿದೆ: ಡಿ.ವಿ.ಸದಾನಂದ ಗೌಡ

Update: 2019-07-28 14:35 GMT

ಬೆಂಗಳೂರು, ಜು.28: ಸಭಾಧ್ಯಕ್ಷರಿಗೆ ಅಧಿಕಾರವಿದೆ. ಹೀಗಾಗಿ ಅವರು ಆದೇಶ ಮಾಡಿದ್ದಾರೆ. ಆದರೆ, ಇದು ಸಮಂಜಸ ಹೌದೋ ಅಲ್ಲವೋ ಎಂದು ಪ್ರಶ್ನೆ ಮಾಡಲು ನ್ಯಾಯಾಲಯಕ್ಕೆ ಹೋಗುವ ಹಕ್ಕು ಶಾಸಕರಿಗೆ ಇದೆ. ಆದರೂ, ಸಭಾಧ್ಯಕ್ಷರು ಶಾಸಕರನ್ನು ವಿಚಾರ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಅದು ಮಾಡಿಲ್ಲ ಅನ್ನೋ ಲೋಪ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

ಸಭಾಧ್ಯಕ್ಷರ ಸದ್ಯದ ಆದೇಶ ನೋಡಿದರೆ, ಈ ನಿರ್ಧಾರವನ್ನು ಯಾವುದೋ ಒತ್ತಡಕ್ಕೆ ಒಳಗಾಗಿ ಮಾಡಿದ್ದರೋ ಎನ್ನುವ ಸಂಶಯದ ವಾತಾವರಣ ಸೃಷ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News