ಕರ್ನಾಟಕದಲ್ಲಿ ಸಂಪುಟ ರಚನೆಯಾದ ಬಳಿಕ ಹೊಸ ಕಾರ್ಯಯೋಜನೆ ಆರಂಭ: ವಿಜಯವರ್ಗಿಯ

Update: 2019-07-28 17:20 GMT

ಜೈಪುರ, ಜು.28: ಮಧ್ಯಪ್ರದೇಶದಲ್ಲಿ ಈಗಿನ ರಾಜಕೀಯ ವಿದ್ಯಮಾನದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ, ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆಯಾದ ಬಳಿಕ ಹೊಸ ಕಾರ್ಯಯೋಜನೆ ಆರಂಭಿಸಲಾಗುವುದು ಎಂದಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರಕಾರದ ಸಚಿವ ಸಂಪುಟ ರನಚೆಗೊಂಡ ಬಳಿಕ ನಮ್ಮ ಹೊಸ ಕಾರ್ಯಯೋಜನೆ ಆರಂಭವಾಗುತ್ತದೆ. ಮಧ್ಯಪ್ರದೇಶದಲ್ಲಿ ಸರಕಾರ ಪತನವಾಗಬೇಕೆಂದು ನಾವು ಬಯಸುತ್ತಿಲ್ಲ. ಆದರೆ ಕಾಂಗ್ರೆಸ್ ಶಾಸಕರಲ್ಲೇ ಅನಿಶ್ಚಿತತೆಯಿದೆ. ನಾಯಕರ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ವಿಶ್ವಾಸವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಹಲವು ಬಣಗಳಿವೆ ಎಂದು ವಿಜಯವರ್ಗಿಯ ಹೇಳಿದ್ದಾರೆ.

ಪ್ರಧಾನಿ ಮೋದಿಯ ನಾಯಕತ್ವ ಅತ್ಯುತ್ತಮ ಎಂಬುದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರ ಭಾವನೆಯಾಗಿದೆ. ಕಾಂಗ್ರೆಸ್ ಹಾಗೂ ಅದರ ಸರಕಾರ ಸ್ವಯಂಕೃತ ಅಪರಾಧದಿಂದ ಪತನವಾಗುತ್ತಿದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News