ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕ ಬೆಂಕಿ

Update: 2019-07-28 18:56 GMT
ಸಾಂದರ್ಬಿಕ ಚಿತ್ರ

ಬೆಂಗಳೂರು, ಜು.28: ಇಲ್ಲಿನ ಶಾಸಕರ ಭವನದ ಹಿಂಭಾಗ ನಿಲ್ಲಿಸಿದ್ದ ಕಾರಿಗೆ ರವಿವಾರ ಮುಂಜಾನೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಕಾರು ಸುಟ್ಟುಹೋಗಿದೆ.

ವಿಧಾನಸೌಧ ಕಡೆಯಿಂದ ಶಾಸಕರ ಭವನ ಪ್ರವೇಶಿಸುವ ದ್ವಾರದ ಬಳಿ ವಿನಯ್ ಎಂಬುವವರು ನಿಲ್ಲಿಸಿದ್ದ ಕಾರಿಗೆ ರವಿವಾರ ಮುಂಜಾನೆ 4:15ರ ವೇಳೆ ಆಕಸ್ಮಿಕ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ವಿಧಾನಸೌಧ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News