ಬಿಜೆಪಿ ಕಾರ್ಯಕರ್ತನ ಮೃತದೇಹ ಕಾಲುವೆಯಲ್ಲಿ ಪತ್ತೆ

Update: 2019-07-28 18:57 GMT

ಕೋಲ್ಕತಾ, ಜು. 28: ಪಶ್ಚಿಮಬಂಗಾಳದ ಬಿಜೆಪಿ ಕಾರ್ಯಕರ್ತನೋರ್ವನ ಮೃತದೇಹ ಹೂಗ್ಲಿ ಜಿಲ್ಲೆಯ ಕಾಲುವೆಯೊಂದರಲ್ಲಿ ರವಿವಾರ ಪತ್ತೆಯಾಗಿದೆ. ಈ ಘಟನೆ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತನನ್ನು ಕಾಶಿನಾಥ್ ಘೋಷ್ ಎಂದು ಗುರುತಿಸಲಾಗಿದೆ. ಈ ಹತ್ಯೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News