ಪಿಎಫ್‌ಐ ಮಡಂತ್ಯಾರ್ ವಲಯದಿಂದ ಸಾರ್ವಜನಿಕ ರಕ್ತದಾನ ಶಿಬಿರ

Update: 2019-07-29 07:13 GMT

ಬಂಟ್ವಾಳ, ಜು.29: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಡಂತ್ಯಾರ್ ವಲಯ ಹಾಗೂ ಯೆನೆಪೊಯ ಮೆಡಿಕಲ್ ಕಾಲೇಜಿನ ಜಂಟಿ ಆಶ್ರಯದಲ್ಲಿ ಪುಂಜಾಲಕಟ್ಟೆಯ ನಂದಗೋಕುಲ ಸಭಾಭವನದಲ್ಲಿ ರವಿವಾರ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಪಿಎಫ್‌ಐ ಮಡಂತ್ಯಾರ್ ವಲಯ ಅಧ್ಯಕ್ಷ ನಿಸಾರ್ ಕುದ್ರಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ಕರ್ನಾಟಕ ಹೈಕೋರ್ಟ್ ನ್ಯಾಯವಾದಿ ಅಶ್ರಫ್ ಅಗ್ನಾಡಿ ಪುತ್ತೂರು, ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯ ಶಿಕ್ಷಕ ಮೋನಪ್ಪ ಕೆ., ಪುಂಜಾಲಕಟ್ಟೆ ಆರಕ್ಷಕ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಎಚ್.ಎನ್. ಕಾಂತು, ಪಿ.ಎಫ್.ಐ. ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಮುಸ್ತಫ ಗುರುವಾಯನಕೆರೆ ಮಾತನಾಡಿದರು.

ಪುಂಜಾಲಕಟ್ಟೆ ಕಾವೇರಿ ಟ್ರೇಡರ್ಸ್ ಮಾಲಕ ಮುಹಮ್ಮದ್ ಯಹ್ಯಾ ಉಪಸ್ಥಿತರಿದ್ದರು.

ಪಿಎಫ್‌ಐ ಬೆಳ್ತಂಗಡಿ ತಾಲೂಕು ಮೆಡಿಕಲ್ ಉಸ್ತುವಾರಿ ಲತೀಫ್ ಪುಂಜಾಲಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪಿಎಫ್‌ಐ ಮಡಂತ್ಯಾರ್ ವಲಯದ ಕಾರ್ಯದರ್ಶಿ ತ್ವಾಹಿರ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 76 ಮಂದಿ ರಕ್ತದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News