ಜು.31 ರಂದು ಸ್ಪೀಕರ್ ಸ್ಥಾನಕ್ಕೆ ಚುನಾವಣೆ

Update: 2019-07-29 16:29 GMT

ಬೆಂಗಳೂರು, ಜು.29: ಸ್ಪೀಕರ್ ಸ್ಥಾನಕ್ಕೆ ಕೆ.ಆರ್.ರಮೇಶ್ ಕುಮಾರ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಜು.31ರಂದು ಬೆಳಗ್ಗೆ 11 ಗಂಟೆಗೆ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ಘೋಷಣೆ ಮಾಡಿದ್ದಾರೆ.

ಸೋಮವಾರ ಮಧ್ಯಾಹ್ನ ಭೋಜನ ವಿರಾಮದ ಬಳಿಕ ಸದನ ಸಮಾವೇಶಗೊಂಡಾಗ ಈ ವಿಷಯವನ್ನು ಪ್ರಕಟಿಸಿದ ಅವರು, ಜು.30ರಂದು ಮಧ್ಯಾಹ್ನ 12 ಗಂಟೆಯವರೆಗೆ ವಿಧಾನಸಭೆಯ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದರು.

ನೂತನ ಸ್ಪೀಕರ್ ಆಯ್ಕೆಯಾಗಿ ಜು.31ರಂದು ಬೆಳಗ್ಗೆ 11 ಗಂಟೆಯವರೆಗೆ ಸದನವನ್ನು ಮುಂದೂಡುತ್ತಿರುವುದಾಗಿ ಕೃಷ್ಣಾರೆಡ್ಡಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News