ನಿಗಮ-ಮಂಡಳಿಗಳ ನೇಮಕಾತಿ ರದ್ದುಪಡಿಸಲು ಸಿಎಂ ಸೂಚನೆ

Update: 2019-07-29 18:01 GMT

ಬೆಂಗಳೂರು, ಜು.29: ಸರಕಾರದ ನಿಗಮ, ಮಂಡಳಿ, ಪ್ರಾಧಿಕಾರ, ಆಯೋಗ, ಸಂಸ್ಥೆಗಳಲ್ಲಿನ ಅಧಿಕಾರೇತರ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮ ನಿರ್ದೇಶನಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಸರಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಂದಿನ ಆದೇಶದವರೆಗೆ ಈ ನಿಗಮ, ಮಂಡಳಿ, ಪ್ರಾಧಿಕಾರ, ಆಯೋಗ, ಸಂಸ್ಥೆಗಳಿಗೆ ಸಂಬಂಧಪಟ್ಟ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಯವರನ್ನು ಅಧ್ಯಕ್ಷರಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News