ರಸ್ತೆ ಅಪಘಾತ: ಬೈಕ್ ಹಿಂಬದಿ ಸವಾರ ಮೃತ್ಯು
Update: 2019-07-29 18:40 GMT
ಮೈಸೂರು,ಜು.29: ಬೊಲೆರೊ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ.
ಮೃತರನ್ನು ಕೊಲ್ಲೇಗೌಡನಹಳ್ಳಿ ನಿವಾಸಿ ಹಳೆಯೂರು ಗ್ರಾಮದ ನಾಗರಾಜ್ ಅವರ ಪುತ್ರ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಕೊಲ್ಲೇಗೌಡನಹಳ್ಳಿಯಲ್ಲಿರುವ ಅಜ್ಜಿ ಮನೆಯಲ್ಲಿ ವಾಸವಾಗಿದ್ದ, ಬೈಕ್ ಚಲಾಯಿಸುತ್ತಿದ್ದ ವಿನೋದ್ ಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಮೃತದೇಹವನ್ನು ಎಚ್.ಡಿ.ಕೋಟೆಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.