ಮಧುಸೂದನ ಭಟ್
Update: 2019-07-30 15:58 GMT
ಶಿರ್ವ, ಜು. 30: ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಉದ್ಯೋಗಿ, ಇನ್ನಂಜೆ ಉಂಡಾರು ಶ್ರೀವಿಷ್ಣುಮೂರ್ತಿ ದೇವಳದಲ್ಲಿ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದ ಐ.ಮಧುಸೂದನ ಭಟ್(67) ಇಂದು ಇನ್ನಂಜೆ ಸ್ವಗೃಹದಲ್ಲಿ ಹೃದಯಾ ಘಾತದಿಂದ ನಿಧನರಾದರು.
ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾಗಿ, ಇನ್ನಂಜೆ ಎಸ್ವಿಎಚ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು, ನಾಟಕ, ಯಕ್ಷಗಾನ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿಯೂ ಸಕ್ರೀಯರಾಗಿದ್ದರು. ಇವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.