ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಗುಂಡಿನ ದಾಳಿಗೆ ಯೋಧ ಹುತಾತ್ಮ

Update: 2019-07-30 16:48 GMT

ಜಮ್ಮು, ಜು.30: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನದ ಪಡೆಗಳು ನಿರಂತರ ಮೂರನೇ ದಿನವೂ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಸೇನಾ ಯೋಧ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ರಜೌರಿ ಜಿಲ್ಲೆಯ ಸುಂದರ್‌ಬನಿ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು ಪಾಕ್ ಪಡೆಗಳಿಗೆ ಭಾರೀ ಹಾನಿ ಸಂಭವಿಸಿದೆ. ಗುಂಡಿನ ಚಕಮಕಿಯಲ್ಲಿ ಭಾರತದ ಯೋಧ ಕೃಷನ್ ಲಾಲ್ (34 ವರ್ಷ) ಮೃತಪಟ್ಟಿದ್ದಾರೆ.

ಉತ್ತರ ಕಾಶ್ಮೀರದ ತಂಘರ್ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಭಾರತೀಯ ಗ್ರಾಮಗಳು ಹಾಗೂ ಸೇನಾಪಡೆಯ ಮುಂಚೂಣಿ ನೆಲೆಗಳ ಮೇಲೆ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News