ಬಂಟ್ವಾಳ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Update: 2019-07-30 17:20 GMT

ಬಂಟ್ವಾಳ, ಜು. 30: ವ್ಯಕ್ತಿಯೊಬ್ಬರು ಹೊಟೇಲ್‍ನ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್‍ನಲ್ಲಿ ಮಂಗಳವಾರ ನಡೆದಿದೆ.

ಪುತ್ತೂರು ತಾಲೂಕಿನ ನೆಹರೂ ನಗರದ ಕಾರ್ಜಲ್ ನಿವಾಸಿ ಹೇಮಂತ್ ರಜನಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ಇವರು ನಿನ್ನೆ ಬಿ.ಸಿ.ರೋಡಿನ ಹೊಟೇಲ್‍ ಒಂದರ ಲಾಡ್ಜ್ ನಲ್ಲಿ ರೂಂ ಮಾಡಿ ತಂಗಿದ್ದರು. ಇಂದು ಬೆಳಗ್ಗೆ ಲಾಡ್ಜ್ ನ ರೂಂ ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೇಮಂತ್ ಅವರು ಅಡಿಕೆ ವ್ಯಾಪಾರಸ್ಥರಾಗಿದ್ದು, ಆರ್ಥಿಕ ನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News