ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-07-30 17:53 GMT

ಬೆಂಗಳೂರು, ಜು.30: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಓರ್ವ ಐಎಎಸ್ ಅಧಿಕಾರಿಗೆ ಪ್ರಭಾರ ವಹಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳವಾರ ಆದೇಶ ಹೊರಡಿಸಿದೆ.

ಧಾರವಾಡ ಜಿಲ್ಲಾಧಿಕಾರಿ ಎಂ.ದೀಪಾ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ, ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ, ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕಾರ್ಮಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ಕ್ಯಾಪ್ಟನ್ ಪಿ.ಮಣಿವಣ್ಣನ್ ಅವರನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರಕಾರದ ಕಾರ್ಯದರ್ಶಿ ಹುದ್ದೆಯಲ್ಲಿ ಪ್ರಭಾರದಲ್ಲಿ ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News