ಲಾರಿ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2019-07-30 18:30 GMT
ಬೆಂಗಳೂರು, ಜು.30: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಸಾಗುತ್ತಿದ್ದ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಮುಂಜಾನೆ ಚನ್ನಸಂದ್ರದಲ್ಲಿ ಈ ಘಟನೆ ನಡೆದಿದ್ದು, ಅಮೇಥನಹಳ್ಳಿಯ ಸುನಿಲ್ ಕುಮಾರ್ ಎಂಬುವರು ಮೃತಪಟ್ಟಿರುವುದಾಗಿ ಪೊಲೀಸರು ಗುರುತಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಮಂಗಳವಾರ ಬೆಳಗ್ಗೆ ವೇಳೆ ಚನ್ನಸಂದ್ರದ ಎಂಇಜೆ ಕಾಲೇಜಿನ ಬಳಿ ಹೋಗುತ್ತಿದ್ದಾಗ, ಗ್ಯಾಸ್ ಸಿಲಿಂಡರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತದನಂತರ, ಸುನಿಲ್ ಕುಮಾರ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಲಾರಿ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.