ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ಜು.31: ಕಸಬ ಬೆಂಗರೆಯಲ್ಲಿ ಪೊಲೀಸರ ಮೇಲೆ ಕಾರು ಚಲಾಯಿಸಿ ಕೊಲೆಯತ್ನ ಆರೋಪ ಪ್ರಕರಣದಲ್ಲಿ ವಾರಂಟ್ ಆಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಕಸಬ ಬೆಂಗರೆ ನಿವಾಸಿ ಮೊಯಿದ್ದೀನ್ ಆದಿಲ್ (22) ಬಂಧನಕ್ಕೊಳಗಾದ ಆರೋಪಿ.
ಆರೋಪಿ 2017ನೇ ಜುಲೈ ತಿಂಗಳಿನಲ್ಲಿ ಕಸಬ ಬೆಂಗರೆಯಲ್ಲಿ ಪೊಲೀಸರ ಮೇಲೆ ಕಾರು ಚಲಾಯಿಸಿ ಕೊಲೆ ಮಾಡಲು ಯತ್ನಿಸಿದ ಬಗ್ಗೆ ಕೇಸು ದಾಖಲಾಗಿತ್ತು. ನ್ಯಾಯಾಲಯ ಈತನಿಗೆ ಬಂಧನ ವಾರಂಟ್ ಹೊರಡಿಸಿದ್ದು, ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ. ಆತನನ್ನು ಕಸಬ ಬೆಂಗ್ರೆಯಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪತ್ತೆ ಕಾರ್ಯ: ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ ಮಾರ್ಗದರ್ಶ ನದಲ್ಲಿ ಪಣಂಬೂರು ಪೊಲೀಸ್ ಠಾಣಾ ನಿರೀಕ್ಷಕ ಅಜ್ಮತ್ ಅಲಿ ನೇತೃತ್ವದಲ್ಲಿ ಪಿಎಸ್ಸೈ ಉಮೇಶ್ ಕುಮಾರ್ ಎಂ.ಎನ್. ಹಾಗೂ ಶೈಲೇಂದ್ರ ಕೆ. ಮತ್ತು ಭರತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.