ಬೈಕ್ ಕಳವು ಪ್ರಕರಣ: ಇಬ್ಬರ ಬಂಧನ

Update: 2019-07-31 17:28 GMT

ಬೆಂಗಳೂರು, ಜು.31: ಬೈಕ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಂಪೇಗೌಡ ಲೇಔಟ್ ನಿವಾಸಿ ನವೀನ್(19) ಹಾಗೂ ಮಾಗಡಿಯ ಕುಣಿಗನಹಳ್ಳಿಯ ಲಕ್ಷ್ಮ್ಮಿನಾರಾಯಣ(20) ಎಂಬುವರನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ 23 ಬೈಕ್ ಜಪ್ತಿ ಮಾಡಲಾಗಿದೆ.

ಕುರುಬರಹಳ್ಳಿಯ ಸತ್ಯನಾರಾಯಣ ಲೇಔಟ್‌ನ ಶರತ್ ಎಂಬುವವರು ನಿಲ್ಲಿಸಿದ್ದ ಬೈಕ್ ಅನ್ನು ಕಳೆದ ಜನವರಿ 22 ರಂದು ರಾತ್ರಿ ಕಳವು ಮಾಡಿ ಪರಾರಿಯಾಗಿದ್ದ ಪ್ರಕರಣ ದಾಖಲಿಸಿಕೊಂಡ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಂಧನದಿಂದ ಒಟ್ಟು 16 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 6 ವಾಹನಗಳ ಮಾಲಕರ ಪತ್ತೆಕಾರ್ಯ ಕೈಗೊಳ್ಳಲಾಗಿದೆ. ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News