ವಿವಿಧ ಬ್ಲಾಕ್ ಸಮಿತಿ ಅಧ್ಯಕ್ಷರ ವಜಾಗೊಳಿಸಿ ಕೆಪಿಸಿಸಿ ಆದೇಶ

Update: 2019-07-31 17:52 GMT

ಬೆಂಗಳೂರು, ಜು.31: ರಾಜ್ಯದ ವಿವಿಧ ಭಾಗಗಳ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ವಜಾಗೊಳಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.

ಪಕ್ಷ ಸಂಘಟನೆಗೆ, ಬ್ಲಾಕ್ ಮಟ್ಟದಲ್ಲಿ ಜಿಲ್ಲಾ ಸಮಿತಿಯೊಂದಿಗೆ ಸಹಕಾರ ನೀಡದಿರುವ ದೂರುಗಳ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಕ್ರಮ ಕೈಗೊಂಡಿದ್ದಾರೆ. ದಿನೇಶ್ ಗುಂಡೂರಾವ್ ಆದೇಶದ ಮೇರೆಗೆ ಎಲ್ಲ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯನ್ನೂ ವಿಸರ್ಜಿಸಲಾಗಿದೆ.

ಇತ್ತೀಚೆಗೆ ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿ ನಂತರ ಶಾಸಕತ್ವ ಅನರ್ಹತೆಗೆ ಒಳಗಾಗಿರುವ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿಯೇ ಈ ವಿಸರ್ಜನೆ ಆಗಿರುವುದು ಪ್ರಮುಖವಾಗಿದೆ. ಆದರೆ ವಿಸರ್ಜನೆ ಸಂದರ್ಭದಲ್ಲಿ ಈ ಎಲ್ಲ ಅಧ್ಯಕ್ಷರು ಪಕ್ಷ ಸಂಘಟನೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಆಯಾ ಭಾಗಗಳಿಂದ ಕಾರ್ಯಕರ್ತರಿಂದ ದೂರು ಬಂದಿದೆ ಎಂದು ವಿವರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News