ಸ್ವೀಕೃತಿ - ರವಾನೆ ಶಾಖೆಗೆ ಸಿಎಂ ಬಿಎಸ್ ವೈ ದಿಢೀರ್ ಭೇಟಿ, ಸಮಯಪ್ರಜ್ಞೆ ಇಲ್ಲದ ಅಧಿಕಾರಿಗಳಿಗೆ ಕ್ಲಾಸ್

Update: 2019-08-01 07:21 GMT

ಬೆಂಗಳೂರು, ಆ.1: ವಿಧಾನ ಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ  ಇಂದು ಬೆಳಗ್ಗೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಿಢೀರ್ ಭೇಟಿ ನೀಡಿ  ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

ಸರ್ಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆ ನೀಡಿದ್ದಾರೆ.

ಭೇಟಿಯ ವೇಳೆ ಅಧಿಕಾರಿಗಳು ಕಚೇರಿಯಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ ಗರಂ ಆದ ಸಿಎಂ ಸಮಯಪ್ರಜ್ಞೆ ಇಲ್ಲದ  ಸರಕಾರಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಸರಕಾರಿ ಕೆಲಸದ  ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕು. ಇಲ್ಲದಿದ್ದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ವೈ  ಎಚ್ಚರಿಕೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News