ಕಳವು ಆರೋಪಿಯ ಥಳಿಸಿ ಹತ್ಯೆಗೈದ ಗುಂಪು

Update: 2019-08-01 16:43 GMT

ರಾಂಚಿ, ಆ.1: ಮನೆಯಿಂದ ಹಣ ಮತ್ತು ವಸ್ತುಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

   ಜಾರ್ಖಂಡ್‌ನ ದುಮ್ಕ ಜಿಲ್ಲೆಯ ಚಿಚೂಡಿಯಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಮನೆಗೆ ನುಗ್ಗಿದ ನಾಲ್ವರು ಹಣ ಮತ್ತು ವಸ್ತುಗಳನ್ನು ಕದ್ದು ಪರಾರಿಯಾಗುವ ಪ್ರಯತ್ನದಲ್ಲಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂದರ್ಭ ಮೂವರು ಕದ್ದಿದ್ದ ವಸ್ತುಗಳನ್ನು ಅಲ್ಲೇ ಎಸೆದು ತಪ್ಪಿಸಿಕೊಂಡಿದ್ದರೆ ಭೋಲಾ ಹಝ್ರ ಎಂಬಾತ ಸಿಕ್ಕಿಬಿದ್ದಿದ್ದಾನೆ.

ಗ್ರಾಮಸ್ಥರು ಈತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧೀಕ್ಷಕ ವೈಎಸ್ ರಮೇಶ್ ಹೇಳಿದ್ದಾರೆ. ಭೋಲಾ ಈ ಹಿಂದೆ ದರೋಡೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದ. ಅಲ್ಲದೆ ಕನ್ನ ಹಾಕಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಈತನನ್ನು ಪಂಜಾಬ್ ಪೊಲೀಸರು ಹುಡುಕುತ್ತಿದ್ದರು ಎಂದವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಗ್ರಾಮದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News